ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದ ಬಳಿ ಗುರುವಾರ ಬುಲೆರೊ ಜೀಪು ಹಾಗೂ ದ್ವಿಚಕ್ರವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಬಿರನೂರ ಗ್ರಾಮದ ಮಲ್ಲಿಕಾರ್ಜುನ ಮಹಾದೇವಪ್ಪ(45) ಮೃತರು.
ಗಾಯಗೊಂಡಿರುವ ವ್ಯಕ್ತಿ ಸುಭಾಸ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬುಲೆರೊ ಜೀಪಿನ ಮುಂದಿನ ಗಾಲಿಯ ಟೈರ್ ಸಿಡಿದ ಪರಿಣಾಮ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದ ಬಳಿ ಗುರುವಾರ ಬುಲೆರೊ ಜೀಪು ಹಾಗೂ ದ್ವಿಚಕ್ರವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.