ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ರಾಜಕಾರಣದಲ್ಲಿ ಖರ್ಗೆ ಅವರು ತಮ್ಮದೇ ಆದ ವ್ಯಕ್ತಿತ್ವ ಉಳಿಸಿಕೊಂಡಿದ್ದಾರೆ. ರಾಜ್ಯ, ಕೇಂದ್ರ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿಯಾಗಿದೆ ಎಂದಿದ್ದಾರೆ.