ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಸದ್ಯ ರೈತರಿಗೆ ನೀರಿನ ಅಗತ್ಯ ಇದೆ. ಇಂಥ ಸಂದರ್ಭದಲ್ಲಿ ದುರಸ್ತಿ ಕಾರ್ಯ ಮಾಡುತ್ತಿರುವುದು ಸರಿಯಲ್ಲ. ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೆಶಕರು ಹಾಗೂ ಮುಖ್ಯ ಎಂಜಿನಿಯರ್ ಜತೆ ಮಾತನಾಡಿದ್ದೇನೆ. ಎರಡು ಮೋಟಾರ್ಗಳ ಸಂಪೂರ್ಣ ದುರಸ್ತಿಗೆ ₹10 ಕೋಟಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದಾರೆ. ಉಳಿದ ಮೋಟಾರ್ಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಅದನ್ನು ಬೇಗ ಮುಗಿಸಿ 4 ಮೋಟಾರ್ಗಳ ಮೂಲಕ ಕಾಲುವೆಗೆ ನೀರು ಹರಿಸಲಾಗುವುದು ಎಂದು ಹೇಳಿದ್ದಾರೆ’ ಎಂದು ಹೇಳಿದರು.