‘ನಾನು ಹೈದರಾಬಾದ್ನಲ್ಲಿ ಅತಿಥಿಯ ಹಾಗೆ ಇರಬೇಕು ಎಂದು ಮೋಹನಬಾಬು, ಕೋಟ ಶ್ರೀನಿವಾಸ ರಾವ್ ಅವರಂತಹ ನಟರು ಹೇಳಿದ್ದಾರೆ. ಹಾಗಾಗಿ, ಇಲ್ಲಿ ನಾನು ಆಹ್ವಾನಿತನ ರೀತಿಯಲ್ಲಿಯೇ ಇರುತ್ತೇನೆ. ‘ಮಾ’ ಸದಸ್ಯತ್ವ ಬೇಡ. ನಾನು ಲೋಕಸಭಾ ಚುನಾವಣೆಯಲ್ಲಿಯೂ (ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಿಂದ ಅವರು ಸ್ಪರ್ಧಿಸಿದ್ದರು) ಸೋತಿದ್ದೇನೆ. ಆದರೆ ರಾಜಕೀಯ ಬಿಟ್ಟಿಲ್ಲ. ಇನ್ನು ಮುಂದೆ ‘ಮಾ’ದಲ್ಲಿ ಇರುವುದಿಲ್ಲ. ಆದರೆ, ತೆಲುಗು ಚಿತ್ರರಂಗದಲ್ಲಿ ಇರುತ್ತೇನೆ’ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.