ಹೈದರಾಬಾದ್: ಬೈಕ್ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲುಗು ನಟ ಸಾಯಿ ಧರಂ ತೇಜ್ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈಗ ಮೆಗಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ವಿಜಯದಶಮಿ ಹಬ್ಬ ಹಾಗೂ ಹುಟ್ಟುಹಬ್ಬದ ದಿನವೇ ಸಾಯಿ ತೇಜ್ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿರುವುದಕ್ಕೆ ಮೆಗಾ ಕುಟುಂಬ ಹಾಗೂ ಅಭಿಮಾನಿಗಳು ಸಂತಸಪಟ್ಟಿದ್ದಾರೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
’ಇಂದು ಸಾಯಿ ಧರಂ ತೇಜ್ ಜನ್ಮದಿನ, ಇದೇ ದಿನ ಅವನು ಗುಣಮುಖನಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾನೆ. ಈ ಶುಭ ಸಂದರ್ಭದಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಅವನೊಂದಿಗೆ ಜನ್ಮದಿನ ಆಚರಿಸುತ್ತಿದ್ದೇವೆ’ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದರು.
Another speciality of this #VijayaDashami is @IamSaiDharamTej is returning home after fully recovering from the accident,having had a miraculous escape,making us all happy & grateful!Nothing short of a Rebirth for him!
ಸೆಪ್ಟೆಂಬರ್ 10ರ ರಾತ್ರಿ 8 ಗಂಟೆಗೆ ಮಾಧಾಪುರ್ ಕೇಬಲ್ ಸೇತುವೆ ಮೇಲೆ ತೇಜ್ ಚಲಾಯಿಸುತ್ತಿದ್ದ ಬೈಕ್ ಉರುಳಿ ಬಿದ್ದು, ಅವರಿಗೆ ಕೈಕಾಲು, ಪಕ್ಕೆಲುಬು ಸೇರಿದಂತೆ ದೇಹದ ನಾನಾ ಕಡೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಅಪೋಲೋ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಅಕ್ಟೋಬರ್ 1ರಂದು ಬಿಡುಗಡೆಯಾದ ಸಾಯಿ ತೇಜ್ ಅಭಿನಯದ ’ರಿಪಬ್ಲಿಕ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ದೇವ ಕಟ್ಟಾ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ನಾಯಕಿಯಾಗಿ ಐಶ್ವರ್ಯಾ ರಾಜೇಶ್, ಮುಖ್ಯ ಪಾತ್ರಗಳಲ್ಲಿ ರಮ್ಯಾ ಕೃಷ್ಣ, ಜಗಪತಿ ಬಾಬು ನಟಿಸಿದ್ದಾರೆ.
ಬೈಕ್ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲುಗು ನಟ ಸಾಯಿ ಧರಂ ತೇಜ್ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈಗ ಮೆಗಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.