ಈ ಕುರಿತು ಮಾಧ್ಯಮ ಮಾಹಿತಿ ನೀಡಿರುವ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ನಿರ್ದೇಶಕ, ಏ.11 ರಿಂದ ಜಾರಿಗೆ ಬರುವಂತೆ ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯಶವಂತಪುರ ರೈಲು ನಿಲ್ದಾಣದಲ್ಲಿ ಮೂರನೇ ಪ್ರವೇಶವನ್ನು ಮುಚ್ಚಲಾಗುತ್ತದೆ. ಮೂರನೇ ಪ್ರವೇಶದಲ್ಲಿರುವ ಲಿಫ್ಟ್, ಎಸ್ಕಲೇಟರ್ಗಳು, ಫುಟ್ ಓವರ್ ಬ್ರಿಡ್ಜ್ಗಳು ಮತ್ತು ಇತರ ಪ್ರಯಾಣಿಕರ ಸೌಲಭ್ಯಗಳು ಪ್ರಯಾಣಿಕರ ಬಳಕೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.