‘ಮಾನಸಿಕ ಆರೋಗ್ಯ ಸಾಕ್ಷರತೆ ಅತ್ಯಗತ್ಯವಾದದ್ದು. ಪ್ರತಿಯೊಬ್ಬರು ದೈಹಿಕ ಕಾಯಿಲೆಗಳ ಬಗ್ಗೆ ಗಮನಹರಿಸುತ್ತಾರೆ ಮತ್ತು ಅದಕ್ಕೆ ಸಕಾಲಿಕ ಚಿಕಿತ್ಸೆ ಪಡೆಯುತ್ತಾರೆ. ಆದರೆ ಹೆಚ್ಚಿನ ಜನರಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಅಥವಾ ವೈಜ್ಞಾನಿಕ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಜನರು ಮಾನಸಿಕ ಆರೋಗ್ಯದ ನಿಖರ ತಿಳುವಳಿಕೆ ಹೊಂದಿಲ್ಲ,’ ಎಂದು ಬೇಸರ ವ್ಯಕ್ತಪಡಿಸಿದರು.