ಬೆಂಗಳೂರು: ಅನಾರೋಗ್ಯದ ಕಾರಣ ದೆಹಲಿ ಏಮ್ಸ್ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನೋಡಲು ಕಾಂಗ್ರೆಸ್ ನಾಯಕರು ಬರುತ್ತಿಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಅಮಿತ್, ನಂತರ ಅದನ್ನು ಡಿಲೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಕೇಂದ್ರ ಆರೋಗ್ಯ ಸಚಿವರು ಹೋಗಿದ್ದಾರೆ, ಆದರೆ ಕಾಂಗ್ರೆಸ್ನ ಬಹುತೇಕ ನಾಯಕರು ಸಿಂಗ್ ಅವರ ಕುರಿತು ತಲೆಕೆಡಿಸಿಕೊಂಡಿಲ್ಲ ಎಂದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದರು.
ಅದಾದ ಬಳಿಕ, ಸ್ವಲ್ಪ ಹೊತ್ತಿನಲ್ಲೇ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಅಮಿತ್ ಮಾಳವೀಯ ಟ್ವೀಟ್
ಜ್ವರ ಮತ್ತು ನಿತ್ರಾಣವಾಗಿದ್ದರಿಂದ ಮನಮೋಹನ್ ಸಿಂಗ್ ಅವರನ್ನು ಬುಧವಾರ ದೆಹಲಿ ಏಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
I pray for the good health and speedy recovery of Dr. Manmohan Singh Ji.