ನವದೆಹಲಿ: ದುರ್ಗಾ ದೇವಿ ಮೂರ್ತಿಯ ಮೆರವಣಿಗೆಯ ನಡುವೆ ಕಾರು ನುಗ್ಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಛತ್ತೀಸ್ಗಡದ ಜಶ್ಪುರದಲ್ಲಿ ಈ ದುರಂತ ಸಂಭವಿಸಿದೆ.
ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ರೈತರ ಮೆರವಣಿಗೆ ಸಮಯದಲ್ಲಿ ಕಾರು ಹರಿದು ಹಲವು ಜನರು ಸಾವಿಗೀಡಾದ ಘಟನೆ ಇತ್ತೀಚೆಗೆ ನಡೆದಿತ್ತು. ಇಂದು ಜಶ್ಪುರದ ಪಥಲ್ಗಾಂನಲ್ಲಿ ದುರ್ಗಾ ಮೂರ್ತಿಯ ವಿಸರ್ಜನೆಗಾಗಿ ಸಾಗುತ್ತಿದ್ದ ಮೆರವಣಿಯ ಮೇಲೆ ವೇಗವಾಗಿ ಬಂದ ಕಾರೊಂದು ನುಗ್ಗಿರುವುದು ವಿಡಿಯೊದಲ್ಲಿ ದಾಖಲಾಗಿದೆ.
'ಒಂದು ಮೃತ ದೇಹವನ್ನು ಆಸ್ಪತ್ರೆಗೆ ತರಲಾಗಿದೆ, ಇತರೆ 16 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರಿಗೆ ಮೂಳೆ ಮುರಿದಿರುವುದು ಪತ್ತೆಯಾಗಿದೆ' ಎಂದು ವೈದ್ಯಾಧಿಕಾರಿ ಜೇಮ್ಸ್ ಮಿಂಜ್ ಹೇಳಿರುವುದು ಎಎನ್ಐ ಸುದ್ದಿ ಸಂಸ್ಥೆ ಟ್ವೀಟಿಸಿದೆ.
A car ram down on the people of a Hindu procession in Chattisgarhpic.twitter.com/JICwmy5bnx
— Wali (@netaji_bond) October 15, 2021
ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೇಗವಾಗಿ ಬಂದ ಕಾರು ಮೆರವಣಿಗೆಯಲ್ಲಿದ್ದ ಜನರಿಗೆ ಡಿಕ್ಕಿ ಹೊಡೆದು ಅದೇ ವೇಗದಲ್ಲಿ ಮುನ್ನುಗ್ಗಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಹತ್ತಾರು ಮಂದಿ ನೆಲಕ್ಕೆ ಉರುಳಿದ್ದು, ಚಕ್ರದ ಕೆಳಗೆ ಸಿಲುಕಿರುವುದು ವಿಡಿಯೊದಲ್ಲಿದೆ. ಅನಂತರ ಜನರು ಕಾರನ್ನು ಹಿಂಬಾಲಿಸಿ ಓಡುತ್ತಾರೆ.
ದುರಂತಕ್ಕೆ ಕಾರಣವಾದ ಮಧ್ಯ ಪ್ರದೇಶದ ಸಂಖ್ಯೆ ಒಳಗೊಂಡ ಮಹೀಂದ್ರಾ ಕ್ವಾಂಟೊ ಕಾರನ್ನು ಜನರು ತಡೆದಿದ್ದಾರೆ. ಜನರು ವಾಹನಕ್ಕೆ ಬೆಂಕಿ ಹಚ್ಚಿ ಪ್ರತಿಭಟಿಸುವ ಜೊತೆಗೆ ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಕಾರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಂಗ್ರಹವಿತ್ತು ಎಂದು ಆರೋಪಿಸಿರುವುದಾಗಿ ವರದಿಯಾಗಿದೆ.
Scary video from Durga Immersion
— Wali (@netaji_bond) October 15, 2021
Jashpur Nagar (Chhattisgarh). pic.twitter.com/rEbroqiZoN
ಘಟನೆಯ ಸಂಬಂಧ ಮಧ್ಯ ಪ್ರದೇಶ ಮೂಲದ 21 ವರ್ಷ ವಯಸ್ಸಿನ ಬಬ್ಲು ವಿಶ್ವಕರ್ಮ ಮತ್ತು 26 ವರ್ಷದ ಶಿಶುಪಾಲ್ ಸಾಹು ಎಂಬುವವರನ್ನು ಬಂಧಿಸಲಾಗಿದೆ ಎಂದು ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
This is the vehicle which ran over at least 25 people in Chhattisgarh, during Durga Visarjan.
— Tanushree Pandey (@TanushreePande) October 15, 2021
As per locals and eye-witnesses, the Yellow packets found inside the car have contraband items inside them. Police yet to confirm. @ThePrintIndia https://t.co/TK1OqT7o5b pic.twitter.com/KOnkliPM5i
ನವದೆಹಲಿ: ದುರ್ಗಾ ದೇವಿ ಮೂರ್ತಿಯ ಮೆರವಣಿಗೆಯ ನಡುವೆ ಕಾರು ನುಗ್ಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಛತ್ತೀಸ್ಗಡದ ಜಶ್ಪುರದಲ್ಲಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ರೈತರ ಮೆರವಣಿಗೆ ಸಮಯದಲ್ಲಿ ಕಾರು ಹರಿದು ಹಲವು ಜನರು ಸಾವಿಗೀಡಾದ ಘಟನೆ ಇತ್ತೀಚೆಗೆ ನಡೆದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.