‘ಅಮಿತ್ ಶಾ ಅವರು ಮೊದಲು ಚೀನಾದ ಹೆಸರು ಉಚ್ಚರಿಸಲಿ. ಆ ದೇಶದ ಬಗ್ಗೆ ಮೋದಿ ಸರ್ಕಾರಕ್ಕೆ ಹೆದರಿಕೆ ಇದೆ. ಚೀನಾ ಹೆಸರೆತ್ತಿದ ಬಳಿಕ ಆ ದೇಶದ ಯೋಧರನ್ನು ನಮ್ಮ ಭೂ ಪ್ರದೇಶಗಳಿಂದ ಯಾವಾಗ ಹೊರಗೆ ಕಳುಹಿಸುತ್ತೀರಿ ಎಂಬುದನ್ನು ತಿಳಿಸಲಿ. ಚೀನಾ ಸೇನೆಯು ತನ್ನ ಲಜ್ಜೆಗೆಟ್ಟ ನಡೆಯಿಂದ ಆತಿಕ್ರಮಿಸಿಕೊಂಡಿರುವ ನಮ್ಮ 900 ಕಿಲೋಮೀಟರ್ ಭೂ ಪ್ರದೇಶವನ್ನು ಮರಳಿ ಪಡೆಯಲು ಅವರು ಗಡುವು ವಿಧಿಸಿಕೊಳ್ಳಲಿ’ ಎಂದು ಸುರ್ಜೇವಾಲ ಹೇಳಿದ್ದಾರೆ.