×
ADVERTISEMENT
ಈ ಕ್ಷಣ :
ADVERTISEMENT

ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ

Published : 16 ಜನವರಿ 2022, 11:37 IST
ಫಾಲೋ ಮಾಡಿ
Comments

ನವದೆಹಲಿ: ₹ 50 ಲಕ್ಷಕ್ಕೂ ಹೆಚ್ಚು ಲಂಚ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ವಲಯ ಉದ್ದಿಮೆ ಭಾರತೀಯ ಅನಿಲ ಪ್ರಾಧಿಕಾರದ (ಗೇಲ್) ನಿರ್ದೇಶಕ (ಮಾರುಕಟ್ಟೆ) ಇ.ಎಸ್‌.ರಂಗನಾಥನ್‌ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಗೇಲ್‌ ಮಾರಾಟ ಮಾಡುವ ಪೆಟ್ರೊ ಕೆಮಿಕಲ್‌ ಉತ್ನನ್ನಗಳನ್ನು ಖರೀದಿಸುವ ಖಾಸಗಿ ಕಂಪನಿಗಳಿಗೆ ರಿಯಾಯಿತಿ ಕೊಡುವುದಕ್ಕಾಗಿ ಅವರು ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಈ ಲಂಚದ ಹಗರಣವನ್ನು ಭೇದಿಸಿದ ಸಿಬಿಐ ಅಧಿಕಾರಿಗಳು, ರಂಗನಾಥನ್‌ ಹಾಗೂ ಮಧ್ಯವರ್ತಿಗಳು ಮತ್ತು ವರ್ತಕರು ಸೇರಿ ಐವರನ್ನು ಶನಿವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಂಗನಾಥನ್‌ ಅವರ ಕಚೇರಿ ಹಾಗೂ ನಿವಾಸ ಸೇರಿದಂತೆ ಎಂಟು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದರು. ₹ 1.29 ಕೋಟಿ ನಗದು, ಚಿನ್ನಾಭರಣಗಳು ಸೇರಿ ₹ 1.25 ಕೋಟಿ ಮೌಲ್ಯದ ವಸ್ತುಗಳನ್ನು ಈ ಶೋಧ ಕಾರ್ಯದ ವೇಳೆ ವಶಪಡಿಸಿಕೊಳ್ಳಲಾಗಿದೆ’ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಶಿ ತಿಳಿಸಿದ್ದಾರೆ.

₹ 50 ಲಕ್ಷಕ್ಕೂ ಹೆಚ್ಚು ಲಂಚ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ವಲಯ ಉದ್ದಿಮೆಯಾದ ಜಿಎಐಎಲ್‌ನ (ಗೇಲ್) ನಿರ್ದೇಶಕ (ಮಾರುಕಟ್ಟೆ) ಇ.ಎಸ್‌.ರಂಗನಾಥನ್‌ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT