ಲಂಖಿಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಬೆಂಬಲ ಸೂಚಿಸಿರುವ ವರುಣ್ ಗಾಂಧಿ, ತಪ್ಪಿತ್ತಸ್ಥರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಬೇಡಿಕೆಯಿರಿಸಿದ್ದರು. ಇದು ಬಿಜೆಪಿಯಲ್ಲಿ ಇರಿಸು ಮುರಿಸು ಉಂಟು ಮಾಡಿತ್ತು. ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ ಅವರನ್ನು ಕೈಬಿಡಲಾಗಿದೆ.