ಶನಿವಾರ ಸುಮಾರು 12 ತಾಸು ವಿಚಾರಣೆಯ ಬಳಿಕ ಆಶಿಶ್ ಅವರನ್ನು ಬಂಧಿಸಲಾಗಿತ್ತು. ರೈತರ ಮೇಲೆ ಹರಿಸಿದ ಎಸ್ಯುವಿಯನ್ನು ಆಶಿಶ್ ಅವರೇ ಚಾಲನೆ ಮಾಡುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅಜಯ್ ಮಿಶ್ರಾ ಮತ್ತು ಆಶಿಶ್ ಅಲ್ಲಗಳೆದಿದ್ದಾರೆ. ಆರೋಪಿಗಳನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿತ್ತು.