×
ADVERTISEMENT
ಈ ಕ್ಷಣ :
ADVERTISEMENT

ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್‌ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಫಾಲೋ ಮಾಡಿ
Comments

ಲಖಿಂಪುರ ಖೇರಿ: ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ. 

ಬಿಗಿ ಭದ್ರತೆಯ ನಡುವೆ ಮೂವರು ಆರೋಪಿಗಳನ್ನು ಲಖಿಂಪುರ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ತಿಕೊನಿಯಾ-ಬನ್ಬೀರ್‌ಪುರ ರಸ್ತೆಯಲ್ಲಿರುವ ಘಟನಾ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಘಟನೆಯನ್ನು ಮರುಸೃಷ್ಟಿಸಲಾಗಿದೆ.  

ಅಕ್ಟೋಬರ್ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದರು. ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಇದರಲ್ಲಿ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ. 

ಆಕ್ರೋಶಗೊಂಡ ರೈತರು ವಾಹನದಲ್ಲಿದ್ದ ಕೆಲವರನ್ನು ಹೊಡೆದರು ಎಂದು ಆರೋಪಿಸಲಾಗಿದೆ. ಮೃತರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಚಾಲಕ ಸೇರಿದ್ದಾರೆ. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡ ಮೃತಪಟ್ಟಿದ್ದಾರೆ. 

ಕೇಂದ್ರ ಸಚಿವ ಅಜಯ್ ಮಿಶ್ರಾ ಹಾಗೂ ಅವರ ಪುತ್ರ ಆಶಿಶ್ ಮಿಶ್ರಾ ವಾಹನದಲ್ಲಿ ಇದ್ದರು ಎಂದು ರೈತರು ಆರೋಪಿಸಿದ್ದರು. ಆದರೆ ಆರೋಪವನ್ನು ನಿರಾಕರಿಸಿರುವ ಆಶಿಶ್ ಹಾಗೂ ಅವರ ತಂದೆ, ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ಒದಗಿಸುತ್ತೇವೆ ಎಂದಿದ್ದರು. 

ಅಕ್ಟೋಬರ್ 9ರಂದು 12 ತಾಸಿನ ಸುದೀರ್ಘ ವಿಚಾರಣೆಯ ಬಳಿಕ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಯಿತು. ಅಕ್ಟೋಬರ್ 12ರಿಂದ 15ರ ವರೆಗೆ ಪೊಲೀಸ್ ಕಸ್ಟಡಿಗೆ ರವಾನಿಸಲಾಗಿದೆ.

ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT