ನೆಹರೂ ಕುಟುಂಬದ ಇಬ್ಬರೂ ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರವಾಸದಲ್ಲಿ ತೊಡಗಿದ್ದಾರೆ. ಅಲ್ಲಿ ಅವರು ಲಖಿಂಪುರ–ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿಯಾಗಿದ್ದಾರೆ. ಆದರೆ, ಅವರ ಪಕ್ಷದ ಆಡಳಿತವಿರುವ ರಾಜಸ್ಥಾನದಲ್ಲಿ ದಲಿತರಿಗೆ ಏನಾಗುತ್ತಿದೆ ಎಂದು ನೋಡಲೂ ಸಮಯವಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.