ಕಾರ್ಯಕಾರಿಣಿ ಸಭೆ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಛತ್ತೀಸಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು, ಪಕ್ಷದ ಮಂದಿನ ಕೆಲವು ತಿಂಗಳ ಕಾರ್ಯಸೂಚಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಯಿತು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಸಾಂಸ್ಥಿಕ ಸಂಘಟನೆಗಳ ಮುಖಂಡರ ಜೊತೆಗೆ ವಿಸ್ತೃತ ಚರ್ಚೆ ನಡೆಸಿರುವ ಮಧ್ಯೆಯೇ ಈ ಸಭೆಯು ನಡೆದಿದೆ.