ಮೋದಿ ಭೇಟಿ ವಿಚಾರವನ್ನು ಖಚಿತಪಡಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಧಾನಿಯವರು ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅದೇರೀತಿ, ಆದಿ ಗುರು ಶಂಕರಾಚಾರ್ಯರ ಸಮಾಧಿ ಮರು ನಿರ್ಮಾಣ ಸೇರಿದಂತೆ ₹ 250 ಕೋಟಿ ವೆಚ್ಚದ ಕೇದಾರಪುರಿ ಪುನರ್ನಿರ್ಮಾಣ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.