ಚನ್ನಿ ಅವರ ಸಂಬಂಧಿ ಭೂಪೀಂದರ್ ಸಿಂಗ್ ಹನಿ ಅವರಿಗೆ ಸೇರಿದ ಜಾಗಗಳು ಸೇರಿದಂತೆ, ಚಂಡೀಗಡ, ಮೊಹಾಲಿ, ಲುಧಿಯಾನ ಹಾಗೂ ಪಠಾಣ್ಕೋಟ್ನ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದರು. ಈ ಶೋಧ ಕಾರ್ಯಾಚರಣೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು. ದೇಶದ ಏಕೈಕ ದಲಿತ ಮುಖ್ಯಮಂತ್ರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.