ನಾಗಪುರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ರಾಷ್ಟ್ರದ ಅಭಿವೃದ್ಧಿಗೆ ತೊಡಕಾಗಿರುವುದು ವೇಗವಾಗಿ ವೃದ್ಧಿಸುತ್ತಿರುವ ಜನಸಂಖ್ಯೆ. ಇದರ ಬಗ್ಗೆ ಹಲವರು ಕಳವಳಗೊಂಡಿದ್ದಾರೆ. ಜನಸಂಖ್ಯೆ ವೃದ್ಧಿಯಿಂದ ಸಾಕಷ್ಟು ಸಮಸ್ಯೆಗಳು ಭವಿಷ್ಯದಲ್ಲಿ ಎದುರಾಗಲಿವೆ. ಹಾಗಾಗಿ ಸಮಯೋಚಿತವಾಗಿ ಜನಸಂಖ್ಯೆ ನಿಯಂತ್ರಣದ ಸವಾಲು ತೆಗೆದುಕೊಳ್ಳಬೇಕಿದೆ ಎಂದರು.