×
ADVERTISEMENT
ಈ ಕ್ಷಣ :
ADVERTISEMENT

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

ಫಾಲೋ ಮಾಡಿ
Comments

ಮುಂಬೈ: ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ. 

ಇದು ರಾಜ್ಯ ಸರ್ಕಾರ ಪ್ರಾಯೋಜಕತ್ವದ ಬಂದ್‌. ಈ ಬಂದ್‌ ಅನಗತ್ಯವಾಗಿತ್ತು ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.  ಶಿವಸೇನಾ ಮತ್ತು ಎನ್‌ಸಿಪಿ ಜತೆಯಾಗಿ ಠಾಣೆಯಲ್ಲಿ ಭಾರಿ ರ‍್ಯಾಲಿಯನ್ನು ಆಯೋಜಿಸಿತ್ತು. ಬಂದ್‌ ನಡುವೆಯೂ ಆಟೋರಿಕ್ಷಾ ಚಾಲನೆ ಮಾಡಿದ ಕೆಲವು ಚಾಲಕರನ್ನು ಈ ಪಕ್ಷಗಳ ಕಾರ್ಯಕರ್ತರು ಥಳಿಸಿದ್ದಾರೆ.

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT