ರಾಷ್ಟ್ರ ರಾಜಧಾನಿ ದೆಹಲಿ, ಕರ್ನಾಟಕ, ಒಡಿಶಾ, ಮಧ್ಯ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ಜಮ್ಮು –ಕಾಶ್ಮೀರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಏರಿಕೆಯಾಗಿದೆ. ಈ ರಾಜ್ಯಗಳಲ್ಲಿ ಪ್ರತಿನಿತ್ಯ 40ರಿಂದ 44 ಡಿಗ್ರಿವರೆಗೂ ತಾಪಮಾನ ದಾಖಲಾಗುತ್ತಿದೆ.
ತಾಪಮಾನ ಏರಿಕೆ ಆಗಿರುವುರಿಂದ ತಂಪು ಹವೆ ಕಡಿಮೆಯಾಗುತ್ತಿದೆ. ಮಹಿಳೆಯರು ತಲೆ ಮೇಲೆ ದುಪ್ಪಟ್ಟಾ ಹಾಕಿಕೊಂಡು ಓಡಾಡುತ್ತಿದ್ದಾರೆ. ವೃದ್ಧರು ಮತ್ತು ಮಕ್ಕಳು ಗಿಡ, ಮರಗಳ ನೆರಳಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ. ಒಮ್ಮೆ ಹೊರಗೆ ಸುತ್ತಾಡಿ ಮನೆಗೆ ಬಂದರೆ ಜನರನ್ನು ‘ಸುಸ್ತು’ ಕಾಡುತ್ತಿದೆ.
ಬಿಸಿಲು ಹೆಚ್ಚಿರುವುದರಿಂದ ಪ್ರಾಣಿಗಳು ಮತ್ತು ಪಕ್ಷಿ ಸಂಕುಲ ಅಪಾಯಕ್ಕೆ ಸಿಲುಕಿವೆ.