ದಕ್ಷಿಣ ಗೋವಾದ ಧಾರ್ಬಂಡೋರಾ ಗ್ರಾಮದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಅಡಿಗಲ್ಲು ಹಾಕಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಗಡಿಯಾಚೆಗಿನ ಭಯೋತ್ಪಾದಕರು ಭಾರತದೊಳಗೆ ನುಸುಳಿಕೊಂಡು ಅಶಾಂತಿ ಸೃಷ್ಟಿಸುತ್ತಿದ್ದರು. ಆದರೂ ದೆಹಲಿಯಲ್ಲಿದ್ದ ಸರ್ಕಾರ ಏನೂ ಮಾಡುತ್ತಿರಲಿಲ್ಲ. ಆದರೆ ಈಗಿನ ಸರ್ಕಾರ ಉಗ್ರರಿಗೆ ಅರ್ಥವಾಗುವ ಭಾಷೆಯಲ್ಲಿಯೇ ಉತ್ತರಿಸುತ್ತದೆ' ಎಂದು ಹೇಳಿದ್ದಾರೆ.