ಇದರ ಬೆನ್ನಲ್ಲೇ ಪಕ್ಷದ ಮುಖ್ಯ ಕಾರ್ಯದರ್ಶಿ ಪಾರ್ಥ ಚಟರ್ಜಿ, ಬಹಿರಂಗವಾಗಿ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಜತೆಗೆ ಯಾವುದೇ ವಿಚಾರವಿದ್ದರೂ, ಆಂತರಿಕ ಸಮಿತಿ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಇದನ್ನು ಪಾಲಿಸದವರ ವಿರುದ್ಧ ಶಿಸ್ತು ಸಮಿತಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.