ಹತ್ಯೆಗೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ ಒಬ್ಬ ಆರೋಪಿ ಸೋನಿಪತ್ ಪೊಲೀಸರಿಗೆ ಶರಣಾಗಿದ್ದ. ನ್ಯಾಯಾಲಯವು, ಆ ಆರೋಪಿಯನ್ನು ಈಗಾಗಲೇ ಪೊಲೀಸ್ ಬಂಧನಕ್ಕೆ ನೀಡಿದೆ. ಇನ್ನೂ ಇಬ್ಬರು ಆರೋಪಿಗಳು ಶನಿವಾರ ಪೊಲೀಸರಿಗೆ ಶರಣಾಗಿದ್ದರು. ಶನಿವಾರ ಸಂಜೆ ನಿಹಾಂಗರ ನಾಯಕ ನಾರಾಯಿಣ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದರು. ಈ ಮೂವರನ್ನೂ ಭಾನುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.