ಬುಲಂದ್ಶಹರ್: ಇಲ್ಲಿನ ಸಿಕಂದರಾಬಾದ್ನ ಫರೀದ್ಪುರ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರ ಕಾರನ್ನು ತೊಳೆಯುತ್ತಿರುವ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಿಡಿಯೊದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರ ಕಾರನ್ನು ವಿದ್ಯಾರ್ಥಿಯು ಸ್ವಚ್ಛಗೊಳಿಸುತ್ತಿರುವ ದೃಶ್ಯಗಳಿವೆ.
ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಿಕ್ಷಣಾಧಿಕಾರಿ ಅಖಂಡ್ ಪ್ರತಾಪ್ ಸಿಂಗ್ ಅವರು ತನಿಖೆ ನಡೆಸಲು ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಲಂದ್ಶಹರ್: ಇಲ್ಲಿನ ಸಿಕಂದರಾಬಾದ್ನ ಫರೀದ್ಪುರ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರ ಕಾರನ್ನು ತೊಳೆಯುತ್ತಿರುವ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.