×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ಬಿಜೆಪಿಯ ಅಮಾನವೀಯ ಮುಖ ಪ್ರದರ್ಶನ: ಶಿವಸೇನೆ

Published : 18 ಅಕ್ಟೋಬರ್ 2021, 9:37 IST
ಫಾಲೋ ಮಾಡಿ
Comments

ಮುಂಬೈ: ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ನಾಯಕರ ಕುಟುಂಬದ ಸದಸ್ಯರಿಗೆ ನೀಡಿರುವ ಕಿರುಕುಳ ಬಿಜೆಪಿಯ ಅಮಾನವೀಯ ಮುಖವನ್ನು ತೆರೆದಿಡುತ್ತದೆ ಎಂದು ಶಿವಸೇನೆ ಸೋಮವಾರ ವ್ಯಂಗ್ಯವಾಡಿದೆ. 

ಸಾಮಾನ್ಯವಾಗಿ ಜನರು ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿರುವುದಾಗಿ ಹೇಳುತ್ತಾರೆ. ಆದರೆ, ಮಹಾರಾಷ್ಟ್ರದಲ್ಲಿ ಇದು ತದ್ವಿರುದ್ಧವಾಗಿದ್ದು ಬಿಜೆಪಿ ಹಾಸ್ಯದ ಸರಕಾಗಿ ಮಾರ್ಪಟ್ಟಿದೆ ಎಂದು ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.

‘ಬಿಜೆಪಿಯು ತನ್ನ ಸ್ವಂತ ಕಾರ್ಯಸೂಚಿಗಾಗಿಯೇ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ), ಐಟಿ (ಆದಾಯ ತೆರಿಗೆ ಇಲಾಖೆ) ಮತ್ತು ಎನ್‌ಸಿಬಿ (ಮಾದಕ ವಸ್ತುಗಳ ನಿಯಂತ್ರಣ ದಳ) ಬಳಸುತ್ತದೆ. ಇ.ಡಿ ಮತ್ತು ಸಿಬಿಐ ಬಳಸಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಠಾಕ್ರೆ ಬಹಿರಂಗಪಡಿಸಿದ್ದಾರೆ. ಇವು ಶಿಖಂಡಿಯನ್ನು ಗುರಾಣಿಯಾಗಿ ಬಳಸಿದಂತಿದೆ’ ಎಂದು ಶಿವಸೇನೆ ಅಣಕವಾಡಿದೆ.  

ಪ್ರಶ್ನೆಗಳನ್ನು ಎದುರಿಸುವುದಿಲ್ಲ. ತಮ್ಮನ್ನು ಪಶ್ನಿಸುವವರನ್ನೂ ಮುಗಿಸುತ್ತಾರೆ ಎಂದು ಶಿವಸೇನೆಯು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮೇಲೆ ತೀಕ್ಷ್ಣವಾಗಿ ಕಿಡಿಕಾರಿದೆ.  

‘ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ, ಸಂವಿಧಾನ, ಕಾನೂನು ಮತ್ತು ಸುವ್ಯವಸ್ಥೆ ಯಾವುದರಲ್ಲಿಯೂ ನಂಬಿಕೆ ಇಟ್ಟಿಲ್ಲ. ವಿರೋಧ ‍ಪಕ್ಷಗಳ ಮುಖ್ಯಮಂತ್ರಿಗಳನ್ನೂ ಅವರು ಒಪ್ಪುವುದಿಲ್ಲ. ರಾಜಕೀಯದಲ್ಲಿನ ಈ ಹೊಸ ವಿದ್ಯಮಾನವು ಅವರ ಮನಸ್ಥಿತಿಯ ಬಗ್ಗೆ ಹೇಳುತ್ತದೆ’ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ನಾಯಕರ ಕುಟುಂಬ ಸದಸ್ಯರಿಗೆ ನೀಡಿರುವ ಕಿರುಕುಳ ಬಿಜೆಪಿಯ ಅಮಾನವೀಯ ಮುಖವನ್ನು ತೆರೆದಿಡುತ್ತದೆ ಎಂದು ಶಿವಸೇನಾ ಸೋಮವಾರ ವ್ಯಂಗ್ಯವಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT