ಕ್ಷೇತ್ರ ಆಯ್ಕೆಯ ಕುರಿತು ಅಖೀಲೇಶ್ ಯಾವ ಸುಳಿವನ್ನೂ ನೀಡಿಲ್ಲ. ಆದರೆ ಅವರು ಪೂರ್ವಾಂಚಲ ಪ್ರದೇಶದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗೋರಖಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅದು ಕೂಡಾ ಪೂರ್ವಾಂಚಲ ಪ್ರದೇಶದ ಒಂದು ಕ್ಷೇತ್ರ. ಅಖಿಲೇಶ್ ಕೂಡಾ ಪೂರ್ವಾಂಚಲ ಪ್ರದೇಶದ ಕ್ಷೇತ್ರದಿಂದಲೇ ಸ್ಪರ್ಧಿಸಿದರೆ, ನಮ್ಮ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ಧನಾತ್ಮಕ ಸಂದೇಶ ನೀಡಿದಂತಾಗುತ್ತದೆ’ ಎಂದು ಎಸ್ಪಿಯ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.