‘ಅಚ್ಯುತಾನಂದನ್ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದರು. ಅವರನ್ನು ಆರೈಕೆ ಮಾಡುತ್ತಿದ್ದ ಶುಶ್ರೂಷಕಿಗೆ ಗುರುವಾರ ಕೋವಿಡ್ ದೃಢಪಟ್ಟಿತ್ತು. ಬಳಿಕ ಅವರಿಗೂ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರ ಪುತ್ರ ವಿ.ಎ. ಅರುಣ್ ಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.