ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವೇಗಕ್ಕೆ ಸರಿಯಾಗಿ ಬಿಜೆಪಿಯನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕಾದರೆ ಸಚಿವ ಸಂಪುಟ ಪುನಾರಚನೆಯನ್ನು ತಕ್ಷಣವೇ ಮಾಡಬೇಕು. 2006ರ ಮೈತ್ರಿ ಸರ್ಕಾರ, 2008–2013 ರ ಅವಧಿ, ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಾಗೂ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವರಾಗಿರುವವರನ್ನು ಕೈಬಿಡಬೇಕು. ಮುಖ್ಯಮಂತ್ರಿ ಹೊರತುಪಡಿಸಿ ಇಡೀ ಸಂಪುಟವನ್ನೇ ಬದಲಾಯಿಸಿ, ಪಕ್ಷ ನಿಷ್ಠರು ಮತ್ತು ಹೊಸಬರಿಗೆ ಅವಕಾಶ ಕೊಟ್ಟರೆ 2023ರ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ ಇದೆ’ ಎಂಬ ಅಂಶವನ್ನು ಮನವರಿಕೆ ಮಾಡಿಕೊಡುವ ಬಗ್ಗೆಯೂ ಚರ್ಚೆ ನಡೆಯಿತು.