ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ, ಒಂದು ಅಥವಾ ಅದಕ್ಕಿಂತ ಹೆಚ್ಚು ಮನೆಗಳಲ್ಲಿ ಪ್ರಕರಣಗಳು ವರದಿಯಾದಲ್ಲಿ, ಸದರಿ ಸಾಲಿನಲ್ಲಿರುವ ಎಲ್ಲ ಮನೆಗಳು ಅಥವಾ 50 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಿಗೆ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಲಾಗಿದೆ.