ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕೇವಲ ನಮ್ಮ ಪಕ್ಷದ ನಾಯಕರ
ವಿರುದ್ಧ ಪ್ರಕರಣ ದಾಖಲಿಸಿ, ಆಡಳಿತ ಪಕ್ಷದವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ, ಸುಮ್ಮನೆ ಕುಳಿತುಕೊಳ್ಳುವುದಿಲ್ಲ’ ಎಂದರು. ‘ಕೋವಿಡ್ ನಿಯಮ ವಿರುದ್ಧವಾಗಿ ನಡೆದುಕೊಂಡ ಎಲ್ಲರ ವಿರುದ್ಧ ಪ್ರಕರಣ ದಾಖಲಿಸುವುದು ಅಧಿಕಾರಿಗಳಿಗೆ ಬಿಟ್ಟ ವಿಚಾರ. ಅವರ ನಡೆ ನೋಡಿ, ಅವರ ವಿರುದ್ಧ ಹೇಗೆ ಹೋರಾಟ ಮಾಡಬೇಕೆಂದು ತೀರ್ಮಾನಿಸುತ್ತೇವೆ’ ಎಂದರು.