×
ADVERTISEMENT
ಈ ಕ್ಷಣ :
ADVERTISEMENT

ಕರ್ಫ್ಯೂ ಜಾರಿಗೊಳಿಸುವುದಾದರೆ ಲಸಿಕೆ ಏಕೆ ಬೇಕಿತ್ತು: ಸಂಸದ ಪ್ರತಾಪಸಿಂಹ ಪ್ರಶ್ನೆ

ಫಾಲೋ ಮಾಡಿ
Comments

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ. ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ. ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. ಹೀಗಿದ್ದೂ, ಜನರಿಗೆ ಅನಗತ್ಯ ತೊಂದರೆ ಕೊಡಲಾಗುತ್ತಿದೆ’ ಎಂದರು.

‘ಜೀವದಷ್ಟೇ ಜೀವನ ಕಾಪಾಡುವುದೂ ಮುಖ್ಯ. ಉತ್ತರ ಪ್ರದೇಶ, ಗೋವಾ, ಪಂಜಾಬ್‌, ಉತ್ತರಾಖಂಡದಲ್ಲಿ ಚುನಾವಣೆ ನಡೆಯುತ್ತಿದೆ. ಎಲ್ಲಾ ವಿಚಾರವನ್ನು ಪರಿಗಣನೆಗೆ ತೆಗೆದುಕೊಂಡು ಚುನಾವಣಾ ಆಯೋಗ ಚುನಾವಣೆ ನಿಗದಿಪಡಿಸಿದೆ. ಹೀಗಾಗಿ, ನಿಷೇಧಾಜ್ಞೆ ವಿಧಿಸಿ ಜನರಲ್ಲಿ ಭೀತಿ ಮೂಡಿಸಬಾರದು. ವ್ಯಾಪಾರ, ವಹಿವಾಟು ನಡೆಸಲು ತೊಂದರೆ ಕೊಡಬಾರದು’ ಎಂದು ಮನವಿ ಮಾಡಿದರು.

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ. ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ. ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. ಹೀಗಿದ್ದೂ, ಜನರಿಗೆ ಅನಗತ್ಯ ತೊಂದರೆ ಕೊಡಲಾಗುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT