ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ವಿಜಯನಗರ, ಬೀದರ್, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ನಗರಗಳ ಪ್ರಮುಖ ರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು.