‘ಇಂಡ್ ಸಿಂಗ್ ಡೆವಲಪರ್ಸ್ ಕಂಪನಿ ನಿರ್ದೇಶಕ ಎಂ. ಕೃಷ್ಣ ಎಂಬುವರ ಖಾಸಗಿ ಮೊಕದ್ದಮೆ ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ನ್ಯಾಯಾಲಯ, ಆರೋಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರನ್ವಯ ಕೃಷ್ಣ ಅವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದ್ದು, ಆರೋಪಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.