ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ಮುಂದುವರಿದಿದೆ.
'ಶಾಲಾ–ಕಾಲೇಜುಗಳಲ್ಲಿ ನಮ್ಮ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಕೊಡಬೇಕು' ಎಂದು ಆಗ್ರಹಿಸಿ ಹಾಗೂ ಸಮವಸ್ತ್ರ ಸಂಹಿತೆಯನ್ನು ವಿರೋಧಿಸಿ ಅಖಿಲ ಭಾರತ ಮಜಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಮುಸ್ಲಿಮರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.