‘ಸಮಾಜದಲ್ಲಿ ಎರಡು ಪಂಗಡಗಳನ್ನು ಎತ್ತಿಕಟ್ಟುವುದರಲ್ಲಿ, ಒಡೆದು ಆಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಈ ದ್ವಂದ್ವ ನೀತಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧೋಗತಿಯಲ್ಲಿದೆ. ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಕರ್ನಾಟಕ ಜಂಗಲ್ ರಾಜ್ಯವಾಗಿತ್ತು. ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಪೂರಕವಾಗಿ ಕಾಂಗ್ರೆಸ್ ನಿಂತಿತ್ತು. ಮತಾಂಧ ಟಿಪ್ಪುವಿನ ಜಯಂತಿ ಆಚರಿಸಿ, ಕೋಮು ಗಲಭೆ ಸೃಷ್ಟಿಸಿದ ಅವಕಾಶವಾದಿ ಸಿದ್ದರಾಮಯ್ಯ ಅವರಿಂದ ಪೊಲೀಸ್ ಇಲಾಖೆ, ಕಾಪು ಪೊಲೀಸರು ಪಾಠ ಕಲಿಯಬೇಕಾದದ್ದು ಏನೂ ಇಲ್ಲ’ ಎಂದಿದ್ದಾರೆ.