‘ಸಂವಿಧಾನ ಪ್ರತಿಯೊಬ್ಬರಿಗೂ ಪ್ರೀತಿಸುವ ಹಾಗೂ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಆದರೆ, ಹಿಂದೂ ಯುವತಿಯನ್ನು ಪ್ರೀತಿಸಿದ ಕಾರಣಕ್ಕಾಗಿ ಬೆಳಗಾವಿಯಲ್ಲಿ ಅರ್ಬಾಜ್ ಮುಲ್ಲಾ ಎಂಬ ಯುವಕನನ್ನು ಹಿಂದು ಸಂಘಟನೆಯವರು ಅಪಹರಿಸಿ, ದೇಹದ ಭಾಗಗಳನ್ನು ಕತ್ತರಿಸಿ ಎಸೆದಿದ್ದಾರೆ ಎಂದು ವರದಿಯಾಗಿದೆ. ಇದು ಸಮಾಜ ತಲೆ ತಗ್ಗಿಸುವ ಘಟನೆಯಾಗಿದ್ದು, ಮೃತನ ತಾಯಿಗೆ ಸೂಕ್ತ ಭದ್ರತೆ ಮತ್ತು ಪರಿಹಾರ ಸಿಗಬೇಕು’ ಎಂದು ಆಗ್ರಹಿಸಿದರು.