‘ವಿರೋಧಿಸುವವರು ಬೇರೆ ಪಕ್ಷಗಳಲ್ಲೂ ಇರಬಹುದು. ನಮ್ಮಲ್ಲೂ ಇರಬಹುದು. ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕು. ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಎಲ್ಲ ಆರೋಪಗಳಿಗೆ ತಕ್ಕ ಉತ್ತರ ಕೊಡೋಣ. ವಿಧಾನ ಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ಶೀಘ್ರದಲ್ಲಿಯೇ ಚುನಾವಣೆ ನಡೆಯಲಿದೆ. ತದನಂತರ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮ ಪಕ್ಷದ ಅಧಿಕಾರ ಸ್ಥಾಪಿಸುವತ್ತ ಹೆಚ್ಚಿನ ಗಮನ ಕೊಡಿ’ ಎಂದು ಸಲಹೆ ನೀಡಿದರು.