‘ಕರ್ಫ್ಯೂ ಜಾರಿಗೊಳಿಸುವುದಾದರೆ ಲಸಿಕೆ ಏಕೆ ಬೇಕಿತ್ತು’ ಎಂದು ಸಂಸದ ಪ್ರತಾಪ ಸಿಂಹ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ‘ಸಾರ್ವಜನಿಕರ ಅಭಿಪ್ರಾಯ ಏನಿದೆಯೋ ಅದನ್ನು ಅವರು ವ್ಯಕ್ತಪಡಿಸಿದ್ದಾರೆ. ತಜ್ಞರು ನೀಡಿದ ವರದಿ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಜೊತೆಗೆ ಆಯಾ ಜಿಲ್ಲೆಯ ಪರಿಸ್ಥಿತಿ ನೋಡಿ ಜಿಲ್ಲಾಧಿಕಾರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಲಾಗಿದೆ’ ಎಂದು ತಿಳಿಸಿದರು.