×
ADVERTISEMENT
ಈ ಕ್ಷಣ :
ADVERTISEMENT

ಅಶೋಕ ಸಾಮ್ರಾಟನಂತೆ ಆಡುವುದೇಕೆ?: ವಿ. ಸೋಮಣ್ಣ

ಫಾಲೋ ಮಾಡಿ
Comments

ಬೆಂಗಳೂರು: ‘ಸಾಮ್ರಾಟ ಚಕ್ರವರ್ತಿ ಕೆಲಸವೇ ಬೇರೆ, ನನ್ನ ಕೆಲಸವೇ ಬೇರೆ. ಅಶೋಕ ಎಂದು ಅವರ ಅಪ್ಪ, ಅಮ್ಮ ಏಕೆ ಹೆಸರಿಟ್ಟರೋ ಗೊತ್ತಿಲ್ಲ. ಸಾಮ್ರಾಟನಂತೆ ಆಡುತ್ತಾನೆ. ನನಗೆ ದುರಹಂಕಾರ ಇಲ್ಲ, ಪಕ್ಷವೇ ಮುಖ್ಯ. ಈಗ ಇರುವುದು ಕೋವಿಡ್‌ ನಿರ್ವಹಣೆಯ ಉಸ್ತುವಾರಿ ಮಾತ್ರ. ಅಶೋಕ ಹೇಗೆ ಸಭೆ ನಡೆಸುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿಯವರೇ ಕೇಳಬೇಕು’ ಎಂದು ವಿ. ಸೋಮಣ್ಣ ಹೇಳಿದರು.

‘ನಾನು ಸಚಿವನಾಗಿದ್ದಾಗ ಅಶೋಕ ಇನ್ನೂ ಶಾಸಕ. ನಾನಿನ್ನೂ ಬೆಂಝ್‌ ಕಾರಿನಂತೆ ಗಟ್ಟಿಯಾಗಿದ್ದೇನೆ. ಉಸ್ತುವಾರಿ ನೀಡಿದರೆ ಅತ್ಯುತ್ತಮವಾಗಿ ನಿಭಾಯಿಸುವೆ. ಉಸ್ತುವಾರಿ ಸಚಿವರ ವಿಷಯ ಮೂರು– ನಾಲ್ಕು ದಿನಗಳಲ್ಲಿ ಗೊತ್ತಾಗಲಿದೆ. ಅಶೋಕ ಅವರಿಗಾ? ನನಗಾ? ಅಥವಾ ಇಬ್ಬರು ಉಸ್ತುವಾರಿ ಸಚಿವರನ್ನು ಮಾಡುತ್ತಾರಾ’ ಎಂದು ಸ್ಪಷ್ಟವಾಗಲಿದೆ ಎಂದು ಹೇಳಿದರು.

‘ನಾನು ಕರೆದಿದ್ದ ಸಭೆಗೆ ಅಶೋಕ ಬಂದಿರಲಿಲ್ಲ. ಆದರೆ, ಅಶೋಕ ಸಭೆ ಕರೆದರೆ ನಾನು ಹೋಗುವೆ. ಸಭೆಗೆ ಬರದಿದ್ದರೆ ಅವರಿಗೇ ನಷ್ಟ’ ಎಂದರು.

‘ಬೆಂಗಳೂರು ನಗರದ ಉಸ್ತುವಾರಿಯನ್ನು ಯಾರಿಗಾದರೂ ನೀಡಲಿ. ಮುಖ್ಯಮಂತ್ರಿಯವರ ಬಳಿಯೇ ಇದ್ದರೆ ನಮ್ಮ ಅಭ್ಯಂತರ ಇಲ್ಲ. ಆದರೆ, ಬೇರೆಯವರಿಗೆ ನೀಡುವುದಾದರೆ ಹಿರಿತನದ ಆಧಾರದಲ್ಲಿ ನಿರ್ಧಾರ ಮಾಡಬೇಕು. ನನ್ನನ್ನೂ ಪರಿಗಣಿಸಿ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೇಳಿದ್ದೇನೆ’ ಎಂದರು.

ಸಾಮ್ರಾಟ ಚಕ್ರವರ್ತಿ ಕೆಲಸವೇ ಬೇರೆ, ನನ್ನ ಕೆಲಸವೇ ಬೇರೆ. ಅಶೋಕ ಎಂದು ಅವರ ಅಪ್ಪ, ಅಮ್ಮ ಏಕೆ ಹೆಸರಿಟ್ಟರೋ ಗೊತ್ತಿಲ್ಲ. ಸಾಮ್ರಾಟನಂತೆ ಆಡುತ್ತಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT