ಮೂರು ಸಾವಿರಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಿದ್ದು, ಇದಕ್ಕೆ ‘ಆಪರೇಷನ್ ಕಾವೇರಿ’ ಎಂದು ಹೆಸರಿಟ್ಟಿದೆ. ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಎರಡು ವಿಮಾನಗಳು ಮತ್ತು ಒಂದು ಹಡಗು ಸಿದ್ಧಗೊಂಡಿದೆ.
ಈಗಾಗಲೇ, 500 ಭಾರತೀಯರು ಸುಡಾನ್ ಬಂದರು ತಲುಪಿದ್ದಾರೆ. ಮತ್ತಷ್ಟು ಜನರು ಇದೇ ಹಾದಿಯಲ್ಲಿದ್ದಾರೆ. ಸಂಘರ್ಷ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಎಲ್ಲಾ ನಮ್ಮ ಸಹೋದರರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ.
ಅಧಿಕಾರಕ್ಕಾಗಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತ್ತಾಹ್ ಅಲ್ ಬುಹ್ರಾನ್ ಹಾಗೂ ಅರೆಸೇನಾ ಪಡೆ ಮುಖ್ಯಸ್ಥ ಮೊಹಮ್ಮದ್ ಹಮದಾನ್ ದಾಗಲೊ ನಡುವೆ ನಡೆಯುತ್ತಿರುವ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದ್ದು, 400ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ