ವಿಷಯ ತಿಳಿದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಕೆರೆಯಿಂದ ರಸ್ತೆ ನಿರ್ಮಿಸಿದರೆ ಆನೆಗಳು ಕೆರೆಯಿಂದ ಮೇಲೆ ಬರುತ್ತವೆ. ಆ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಆರ್ಎಫ್ಒ ಮಂಜುನಾಥ್ ತಿಳಿಸಿದ್ದಾರೆ.