ನವದೆಹಲಿ, ಅ. 17 (ಪಿಟಿಐ)– ಉತ್ತರಪ್ರದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಬಹುಮತ ಗಳಿಸದೇ ಸರ್ಕಾರ ರಚಿಸಲು ಅಸಮರ್ಥವಾಗಿರುವ ಹಿನ್ನೆಲೆಯಲ್ಲಿ, ವಿಧಾನ ಸಭೆಯನ್ನು ಅಮಾನತಿನಲ್ಲಿರಿಸಿ ಇಂದು ಮಧ್ಯರಾತ್ರಿಯಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸಲಾಗಿದೆ.
ಉತ್ತರಪ್ರದೇಶದ ರಾಜ್ಯಪಾಲ ರೋಮೇಶ್ ಭಂಡಾರಿ ಅವರ ಶಿಫಾರಸಿನ ಮೇರೆಗೆ ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಷ್ಟ್ರಪತಿ ಡಾ.ಶಂಕರ ದಯಾಳ್ ಶರ್ಮಾ ಅವರನ್ನು ಭೇಟಿ ಮಾಡಿ ಉತ್ತರಪ್ರದೇಶದ ರಾಜಕೀಯ ಪರಿಸ್ಥಿತಿಗಳನ್ನು ವಿವರಿಸಿದರು.