ಬೆಂಗಳೂರು, ಜ. 17– ಪ್ರಮುಖ ವಿರೋಧ ಪಕ್ಷಗಳ ಸಭಾತ್ಯಾಗದ ಮಧ್ಯೆ ಇಂದು ಇಲ್ಲಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ವಿವಾದ ಕುರಿತ ಸರ್ವಪಕ್ಷ ಸಭೆ ಜಲ ವಿವಾದಗಳ ಇತ್ಯರ್ಥಕ್ಕೆ ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದಕ್ಕಾಗಿ ಅಂತರ್ರಾಜ್ಯ ಮಂಡಳಿ ಸಭೆ ಕರೆಯುವಂತೆ ಪ್ರಧಾನಿಯನ್ನು ಒತ್ತಾಯಿಸಲು ನಿರ್ಧರಿಸಿತು.