ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ಗಳ ಹೀನಾಯ ಸೋಲುಂಡಿದೆ. ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ಕಪ್ತಾನ ರೋಹಿತ್ ಶರ್ಮಾ, ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಇಲ್ಲ ಎಂದು ಕೊರಗುತ್ತಾ ಕೂರುವುದಕ್ಕೆ ಸಾಧ್ಯವಿಲ್ಲ. ಬುಮ್ರಾ ಆಚೆಗೂ ತಂಡದ ಸಾಮರ್ಥ್ಯವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.