ಕಲಬುರಗಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮೊದಲ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದರು.
ಸಚಿವರಾದ ವಿ. ಸೋಮಣ್ಣ, ನಾರಾಯಯಣಗೌಡ ಅವರು ಪಕ್ಷ ಬಿಡುವ ಬಗ್ಗೆ ಮಾಹಿತಿ ಇಲ್ಲ. ಪಕ್ಷದಿಂದ ಹೋಗುವವರು ಹೋಗಬಹುದು. ಬರುವವರು ಬರಬಹುದು ಎಂದರು.